LOCAL NEWS : ಜೈಲಿನಲ್ಲಿ ಜಾಮರ್ ಅಳವಡಿಕೆ : ಅಕ್ಕ ಪಕ್ಕದ ಗ್ರಾಮಗಳ ಜನರಿಗೆ ಸಂಕಷ್ಟ, ಪ್ರಿಕ್ವೆಸ್ಸಿ ಕಡಿಮೆ ಮಾಡಲು ಒತ್ತಾಯ!

You are currently viewing LOCAL NEWS : ಜೈಲಿನಲ್ಲಿ ಜಾಮರ್ ಅಳವಡಿಕೆ : ಅಕ್ಕ ಪಕ್ಕದ ಗ್ರಾಮಗಳ ಜನರಿಗೆ ಸಂಕಷ್ಟ, ಪ್ರಿಕ್ವೆಸ್ಸಿ ಕಡಿಮೆ ಮಾಡಲು ಒತ್ತಾಯ!

ಪ್ರಜಾ ವೀಕ್ಷಣೆ ಸುದ್ದಿ :-

LOCAL NEWS : ಜೈಲಿನಲ್ಲಿ ಜಾಮರ್ ಅಳವಡಿಕೆ : ಅಕ್ಕ ಪಕ್ಕದ ಗ್ರಾಮಗಳ ಜನರಿಗೆ ಸಂಕಷ್ಟ, ಪ್ರಿಕ್ವೆಸ್ಸಿ ಕಡಿಮೆ ಮಾಡಲು ಒತ್ತಾಯ!

ಕಲಬುರಗಿ : ಇಲ್ಲಿನ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ಮಾಡಲಾಗಿದ್ದು, ಇದರಿಂದಾಗಿ ಅಕ್ಕ ಪಕ್ಕದ ಗ್ರಾಮದ ಜನರಿಗೆ ತೀವ್ರ ಸಂಕಷ್ಟವಾಗುತ್ತಿದೆ.

ಈ ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡಲು ಒತ್ತಾಯಿಸಿ ಕಾಂಗ್ರೆಸ್ ಮುಖಂಡ, ನಂದಿಕೂರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದಲ್ಲಿ ಪಾಣೆಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಸ್ಥರು ಸೇರಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿ, ಮಾತನಾಡಿದ ಪವನ್ ಕುಮಾರ್ ವಳಕೇರಿ ಅವರು, ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಬಾರದೆಂದು ಜಾಮರ್ ಅಳವಡಿಕೆ ಮಾಡಿದ್ದಾರೆ. ಆದರೆ ಇದರ ಶಿಕ್ಷೆ ಕೈದಿಗಳಿಗಿಂತ ಜನಸಾಮಾನ್ಯರಿಗೆ ಹೆಚ್ಚು ಆಗುತ್ತಿದೆ. ಜೈಲು ಸುತ್ತ ಲಿನ ಗ್ರಾಮಗಳಾದ ಪಾಣೇಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಗಳ ಜನರು ತತ್ತರಿಸಿ ಹೋಗಿದ್ದಾರಲ್ಲದೆ, ಈ ಗ್ರಾಮಗಳ ಸಾರ್ವಜನಿಕರಿಗೆ ಮೊಬೈಲ್ ಕರೆಗಳು ಬರುವುದಿಲ್ಲ ಕರೆ ಮಾಡುವ ಸಾಧ್ಯತೆಯೂ ಇಲ್ಲದಂತಾಗಿದೆ.

ಸೀತನೂರ್ ಗ್ರಾಮದಲ್ಲಿ ನೆಟ್ವರ್ಕ್ ಬ್ಯುಸಿ ಎಂದು ತೋರಿಸುತ್ತಿದು, ಫೋನ್ ಕರೆ ಮಾಡಿದವರು ತಪ್ಪಾಗಿ ಅರ್ಥಮಾಡಿಕೊಂಡಿ ಉದ್ದೇಶಪೂರ್ವಕ ವಾಗಿಯೇ ಕರೆ ನಿರ್ಲಕ್ಷಿಸಲಾಗಿದೆ ಎಂಬ ಭಾವನೆ ಮೂಡಿಸುತ್ತಿದ್ದಾರೆ.

ಸಮಸ್ಯೆಗಳಿಂದಾಗಿ ಗ್ರಾಮಸ್ಥರು, ಅವರ ಸ್ನೇಹಿತರ, ಸಂಬಂಧಿಕರು, ಅಧಿಕಾರಿಗಳು, ಮತ್ತು ವಿದೇಶಗಳಿಂದ ಕರೆ ಮಾಡುವವರು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಾಗದೆ ಬಹಳ ತೊಂದರೆ ಈಡಾಗಿದ್ದಾರೆ. ವೈಫೈ ಸಮಸ್ಯೆಯಾಗುತ್ತಿದೆ. ಆನ್‌ಲೈನ್ ಬ್ಯಾಂಕಿಂಗ್‌ಗೆ ತೊಂದರೆಯಾಗಿದೆ. ಒಟಿಪಿಗಳು ಸ್ವೀಕಾರವಾಗುತ್ತಿಲ್ಲ. ತುರ್ತು ಸೇವೆಗಳು, ಯುಪಿಐ ಪಾವತಿಗೆ ತೊಂದರೆಯಾಗಿದ್ದು, ದೈನಂದಿನ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದೆ. ನಿತ್ಯದ ವ್ಯಾಪಾರ ವಹಿವಾಟು ಸೇರಿದಂತೆ ಆನ್‌ಲೈನ್ ಚಟುವಟಿಕೆಗಳಿಗೆ ತೀವ್ರ ಅಡ್ಡಿಚಣೆಯಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಹೀಗಾಗಿ ಜೈಲಿನ ಫ್ರೀಕ್ವೆನ್ಸಿ ತುಂಬಾ ಕಡಿಮೆ ಮಾಡಬೇಕು ಮತ್ತು ಅದರ ವ್ಯಾಪ್ತಿ ಕಡಿಮೆಗೊಳಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇದೇ ದಿ. 26ರಂದು ಮುಖ್ಯ ಹೆದ್ದಾರಿ ರಸ್ತೆ ಬಂದ್ ಮಾಡಿ ಚಳುವಳಿ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಿಯೋಗದಲ್ಲಿ ವಿವಿಧ ಪ್ರಮುಖರಾದ ಶಂಕರ್ ಕಾರ್ಬಾರಿ ,ನಾಗೇಶ್ ಡಿ. ಮುಚಖೇಡ ,ಶರಣಯ್ಯ ಸ್ವಾಮಿ ಸೀತನೂರ್ , ಹುಸೇನ್ ಸಾಬ್ ಮೋಹಜನ್, ವೀರಯ್ಯ ಸ್ವಾಮಿ ಕಲ್ಯಾಣರಾವ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

error: Content is protected !!