LOCAL SPECIAL : ಪೂರ್ವ ಮುಂಗಾರು ಮಳೆ: ಮುದಗಲ್ಲ ಯಲ್ಲಿ ಕೃಷಿ ಚಟುವಟಿಕೆ ಚುರುಕು…!!
ಮುದಗಲ್ಲ ಮೇ 29 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ರೈತರು ಸಂತಸಗೊಂಡಿದ್ದಾರೆ. ಮುಂಗಾರು ಅವಧಿಯ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ.
ಮಳೆಗಾಲ ಪ್ರಾರಂಭ ವಾಗುತ್ತಿದ್ದಂತೆಯೇ ಬಿತ್ತನೆಯನ್ನು ಆರಂಭಿಸಲಿದ್ದಾರೆ. ಕೃಷಿ ಇಲಾಖೆ ಸಹ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ ರೈತರಿಗೆ ಸಕಾಲದಲ್ಲಿ ಲಭ್ಯವಾಗುವಂತೆ ಮಾಡಲು ಕ್ರಮಗಳನ್ನು ಕೈಗೊಂಡಿದೆ.
ಮುದಗಲ್ಲ ಪಟ್ಟಣದ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದೆ. ಆದ್ದರಿಂದ ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಮಳೆಯು ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಇದಕ್ಕೆ ಪೂರಕವಾಗಿ ಕೃಷಿ ಕೇಂದ್ರ ವು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸಲು ಸಜ್ಜಾಗಿದೆ.
ಉತ್ತಮವಾದ ಮಳೆ ಹಿನ್ನಲೆಯಲ್ಲಿ ರೈತರು ಕೃಷಿ ಭೂಮಿ ಹದಗೊಳಿಸುವ ಕಾರ್ಯಗಳಲ್ಲಿ ತೊಡಗಿದ್ದಾರೆ. ರಂಟೆ-ಕುಂಟೆ ಹೊಡೆಯುವುದು, ಎತ್ತುಗಳ ಮೂಲಕ ನೇಗಿಲು ಹೊಡೆಯುತ್ತಿದ್ದಾರೆ. ಟ್ರಾಕ್ಟರ್ಗಳನ್ನು ಬಳಕೆ ಮಾಡಿಕೊಂಡು ಸಹ ಕೃಷಿ ಚಟುವಟಿಕೆಯಲ್ಲಿ ನಿರತವಾಗಿದ್ದಾರೆ.
ಕಂಡುಬಂದಿದೆ.
ಹೋಬಳಿಯಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಮುಂದಾಗಿದ್ದು ಭೂ ಹದ ಮಾಡುವಲ್ಲಿ ನಿರತರಾಗಿದ್ದಾರೆ.
ಪಟ್ಟಣ ಸೇರಿದಂತೆ ಸುತ್ತಮುತ್ತಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಸುರಿದ ಮುಂಗಾರು ಪೂರ್ವ ಮಳೆಯಿಂದ ರೈತರು ನಿಟ್ಟುಸಿರು ಬಿಟ್ಟಂತಾಗಿದೆ.
ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಜಮೀನುಗಳಲ್ಲಿ ಮಹಿಳೆಯರು ಕಸ–ಕಡ್ಡಿ ಸ್ವಚ್ಚಗೊಳಿಸುವುದು, ಕೊಟ್ಟಿಗೆ ಗೊಬ್ಬರ ಹಾಕುವುದು ಹಾಗೂ ಎತ್ತುಗಳ ಮೂಲಕ ರಂಟೆ, ಕುಂಟೆಯ ಉಳುಮೆ ಮಾಡಿ ಜಮೀನನ್ನು ಬಿತ್ತನೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ.
ರೈತರು ತೋಗರಿ ಬೇಸಾಯದತ್ತ ಹೆಚ್ಚಿನ ಒಲವು ಹರಿಸಿದ್ದಾರೆ. ತೊಗರಿ ಜತೆಗೆ ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ, ಹೆಸರು ಸೇರಿದಂತೆ ಇನ್ನಿತರ ಬೆಳೆ ಬೆಳೆಯಲು ಸಜ್ಜಾಗಿದ್ದಾರೆ.