LOCAL NEWS : ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ : ಕೊಟ್ರೇಶ ಜವಳಿ.

You are currently viewing LOCAL NEWS : ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ : ಕೊಟ್ರೇಶ ಜವಳಿ.

ಪ್ರಜಾ ವೀಕ್ಷಣೆ ಸುದ್ದಿ : 

LOCAL NEWS : ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ : ಕೊಟ್ರೇಶ ಜವಳಿ.

ಕೊಪ್ಪಳ : ನರೇಗಾ ಎಲ್ಲ ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಹಾಗೂ ಬಾಕಿ 6 ತಿಂಗಳ ವೇತನ ಪಾವತಿಸುವಂತೆ ಒತ್ತಾಯಿಸಿ ಕೊಪ್ಪಳ ತಾಲೂಕು ಪಂಚಾಯತ್ ಮುಂದೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ & ಬೇರ್ ಫೂಟ್ ಟೆಕ್ನಿಷಿಯನ್ ಜಿಲ್ಲಾ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಘಟಕದ ಅಧ್ಯಕ್ಷರಾದ ಕೊಟ್ರೇಶ ಜವಳಿ ಅವರು ಮಾತನಾಡಿ, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ , ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಸ್ಥರಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ರಾಜ್ಯದಲ್ಲಿ 5000ಕ್ಕೂ ಹೆಚ್ಚು ನೌಕರರಿಗೆ ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಎಲ್ಲಾ ನೌಕರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಕುಟುಂಬ ನಿರ್ವಹಣೆ, ದಿನಸಿ ಖರೀದಿ, ಮಕ್ಕಳ ಶಾಲಾ ಪ್ರವೇಶಾತಿ, ಕುಟುಂಬದ ಸದಸ್ಯರ ವೈದ್ಯಕೀಯ ವೆಚ್ಚಗಳು, ಪ್ರಯಾಣ ವೆಚ್ಚಗಳು, ಸಾಲಗಳ ಮರುಪಾವತಿ, ಇ.ಎಂ.ಐ. ಸೇರಿ ಅನೇಕ ರೀತಿಯ ಖರ್ಚುವೆಚ್ಚಗಳನ್ನು ನಿಭಾಯಿಸಲು ತೀವ್ರ ತೊಂದರೆಯುಂಟಾಗುತ್ತಿದೆ ಎಂದರು.

ಈಗಾಗಲೇ ಬೇಡಿಕೆಗಳ ಈಡೇರಿಕೆಗಾಗಿ ಜು.7 ರಿಂದ ರಾಜ್ಯದ್ಯಂತ ನೌಕರರು ಅಸಹಕಾರ ಚಳುವಳಿ ಮಾಡುತ್ತಿದ್ದು, ಕೂಡಲೇ ಬಾಕಿ ವೇತನ ಪಾವತಿಸಿ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಕೇಂದ್ರ ಸರಕಾರದಿಂದ ಅನುದಾನ ಬಿಡುಗಡೆಯಾದರೂ ರಾಜ್ಯ ಸರಕಾರ ನೌಕರರ ವೇತನ ಪಾವತಿಸುವಲ್ಲಿ ತಾಂತ್ರಿಕ ಕಾರಣ ಹೇಳಿ ವಿಳಂಬ ಮಾಡುತ್ತಿದೆ. ಇದರಿಂದ ನೌಕರರು ಸಂಕಷ್ಟ ಎದುರಿಸುವಂತಾಗಿದೆ ಎಂದರು.

ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಹಾಗೂ ಬಾಕಿ 6 ತಿಂಗಳ ವೇತನ ಪಾವತಿ ಆಗುವವರೆಗೂ ಅಸಹಕಾರ ಚಳುವಳಿ ಮಾಡುತ್ತೇವೆ ಎಂದು ನೌಕರರು ಘೋಷಣೆ ಕೂಗಿದರು.

ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶರಣಯ್ಯ, ಕನಕಪ್ಪ ಚಲವಾದಿ, ವೀಣಾ ಅಂಗಡಿ, ಪ್ರಧಾನ ಕಾರ್ಯದರ್ಶಿಗಳಾದ ಬಾಳಪ್ಪ ತಾಳಕೇರಿ, ಸಹಕಾರ್ಯದರ್ಶಿ ಸರಸ್ವತಿ, ಸಂಘಟನಾ ಕಾರ್ಯದರ್ಶಿಗಳಾದ ಯಮನೂರಪ್ಪ, ವಿನಯಕುಮಾರ್, ವಿಶ್ವನಾಥ ಜಿನ್ನೂರ, ಸಯ್ಯದ್ ತನ್ವೀರ್, ರಮೇಶ, ಹುಸೇನಪಾಷಾ, ವಿಜಯ್, ಪ್ರಮುಖರಾದ ಶರಣಬಸವ ಮಾಲಿ ಪಾಟೀಲ್, ಸಂತೋಷ್ ನಂದಾಪುರ, ಪ್ರಕಾಶ ಸಜ್ಜನ್, ಬಸವರಾಜ ತೋಟದ್, ಮಹೇಶ ಸೂಡಿ, ವಿಜಯಲಕ್ಷ್ಮೀ, ಬೇರ್ ಫೂಟ್ ಟೆಕ್ನಿಷಿಯನ್ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ, ರವಿಶಂಕರ್, ಮಂಜುನಾಥ, ಶರಣಪ್ಪ ಸೇರಿ ಇತರರಿದ್ದರು.

Leave a Reply

error: Content is protected !!