BIG NEWS : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣ : “SIT” ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ..!!
ಬೆಂಗಳೂರು : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಹಂತಿ ಅವರ ನೇತೃತ್ವದ ತಂಡದಲ್ಲಿ ಈ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್ ಅಧಿಕಾರಗಳ ತಂಡವು ಈ ವಿಶೇಷ ತನಿಖಾ ತಂಡ (SIT) ದಲ್ಲಿದೆ. ಈ ತಂಡದಲ್ಲಿ ಅನುಚೇತ್ , ಜಿತೇಂದ್ರ ಕುಮಾರ್, ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎಂದು ತಿಳಿದು ಬಂದಿದೆ.