Rain in Karnataka : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ!!

You are currently viewing Rain in Karnataka : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ!!

ಬೆಂಗಳೂರು : ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು, ಸಹಿತ ಭಾರೀ ಮಳೆಯಾಗುತ್ತದೆ ಎಂದು ತಿಳಿದು ಬಂದಿದೆ. ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಕೊಡಗು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನನ ಜಿಲ್ಲೆಗಳಲ್ಲಿ ಇಂದು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ವಾತಾರಣದ ಹಿನ್ನೆಲೆಯಲ್ಲಿ ಒಂದೆರಡು ದಿನ ಉಷ್ಣಾಂಶದಲ್ಲಿ ಇಳಿಕೆಯಾಗಿದ್ದು, ಇದೀಗ ಮತ್ತೆ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ನಿನ್ನೆಯಿಂದ (ಗುರುವಾರ) ಈವರೆಗಿನ ಬೇಸಿಗೆಯ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಳೆದ ಏಪ್ರಿಲ್ 5 ರಿಂದ ಏ.11 ರ ಅವಧಿಯಲ್ಲಿ ಒಟ್ಟು 6 ದಿನ 40 ಡಿಗ್ರಿಗೂ ಅಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಮಾಹಿತಿ ಬಿಡುಗಡೆಯಾಗಿದೆ.

Leave a Reply

error: Content is protected !!