ಪ್ರಜಾ ವೀಕ್ಷಣೆ ಸುದ್ದಿ :
LOCAL BREAKING : ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧ..!!: ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರ ಪರದಾಟ ..!

ಕುಕನೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ರಾಜ್ಯಾದ್ಯಂತ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ಜನರು ಪರಡಾವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯಕ್ಕೆ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್ಗಳಿಲ್ಲದೆ ಖಾಲಿ ಖಾಲಿ ಅನ್ನಿಸುತ್ತಿದ್ದು, ಖಾಸಗಿ ವಾಹನಗಳು ನಿಲ್ದಾಣದ ಹೊರಗಡೆ ಸಾಲಾಗಿ ನಿಂತಿವೆ.
ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಬಿಸಿ ಜೋರಾಗಿದ್ದು, ಇದು ಈಗ ಜಿಲ್ಲೆ-ತಾಲೂಕಾ ಕೇಂದ್ರಗಳಲ್ಲೂ ಮುಂದುವರೆದಿದೆ. ಇದರಿಂದ ಜನರಸಾಮಾನ್ಯರು, ವಿದ್ಯಾರ್ಥಿಗಳು, ಪ್ರಯಾಣಿಕರ ಪರದಾಟ ಹೇಳತೀರದಂತಾಗಿದೆ.