BREAKING NEWS : ಗವಿಸಿದ್ದಪ್ಪ ಹತ್ಯೆ ಪ್ರಕರಣ : NIA ತನಿಖೆಗೆ ಆಗ್ರಹಿಸಿ, ರಾಜ್ಯಪಾಲರ ಭೇಟಿ ಮಾಡಿದ ಬಿಜೆಪಿ ಶಾಸಕರ ನಿಯೋಗ.!

You are currently viewing BREAKING NEWS : ಗವಿಸಿದ್ದಪ್ಪ ಹತ್ಯೆ ಪ್ರಕರಣ : NIA ತನಿಖೆಗೆ ಆಗ್ರಹಿಸಿ, ರಾಜ್ಯಪಾಲರ ಭೇಟಿ ಮಾಡಿದ ಬಿಜೆಪಿ ಶಾಸಕರ ನಿಯೋಗ.!

BREAKING NEWS : ಹತ್ಯೆ ಪ್ರಕರಣ : NIA ತನಿಖೆಗೆ ಆಗ್ರಹಿಸಿ, ರಾಜ್ಯಪಾಲರ ಭೇಟಿ ಮಾಡಿದ ಬಿಜೆಪಿ ಶಾಸಕರ ನಿಯೋಗ.!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ಕೊಪ್ಪಳದಲ್ಲಿ ಕೆಲ ದಿನಗಳ ಹಿಂದೆ ಬರ್ಬರವಾಗಿ ಹತ್ಯೆಯಾದ ವಾಲ್ಮೀಕಿ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಅವರ ಕುಟುಂಬದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗವು ರಾಜ್ಯಪಾಲರಾದ ಥಾವರ್‌ಚಂದ್‌ ಅವರನ್ನು ಭೇಟಿಯಾಗಿ, ಗವಿಸಿದ್ದಪ್ಪ ಹತ್ಯೆ ಪ್ರಕರಣದಲ್ಲಿ ಸರ್ಕಾರದ ಮೇಲೆ ಒತ್ತಡವನ್ನೇರಿ NIA ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಹೌದು, ಇಂದು ಬೆಂಗಳೂರಿನಲ್ಲಿ ರಾಜಭವನಕ್ಕೆ ತೆರಳಿ ಸಮಗ್ರ ಮತ್ತು ನ್ಯಾಯಸಮ್ಮತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಬಿಜೆಪಿ- ಜೆಡಿಎಸ್‌ ಶಾಸಕರ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

“ಮೃತ ಗವಿಸಿದ್ದಪ್ಪ ನಾಯಕ ಅವರು ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕಾಗಿ ಮತಾಂಧ ಕ್ರೂರಿಯಿಂದ ಅಮಾನುಷವಾಗಿ ಕೊಲೆಯಾಗಿರುವ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಮತಬ್ಯಾಂಕ್ ಓಲೈಕೆಯ ರಾಜಕಾರಣ ಮಾಡುವ ರಾಜ್ಯ ಕಾಂಗ್ರೆಸ್‌ ನೇತೃತ್ವದ ಸರ್ಕಾರದಿಂದ ಯುವಕನ ಸಾವಿಗೆ ನ್ಯಾಯ ಸಿಗುವುದಿಲ್ಲ ಎನ್ನುವುದು ಮೃತನ ಕುಟುಂಬ, ಸ್ಥಳೀಯರು ಹಾಗೂ ವಾಲ್ಮೀಕಿ ಸಮುದಾಯದ ಅಭಿಪ್ರಾಯವಾಗಿದೆ” ಎಂದು ಶಾಸಕ ಗಾಲಿ ಜನಾರ್ಧನ್‌ ರೆಡ್ಡಿ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಹೇಳಿಕೆ ಬರೆದಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ‘ಇದಕ್ಕೆ ಪೂರಕವೆಂಬಂತೆ ಪೊಲೀಸ್ ತನಿಖೆ ಮಂದಗತಿಯಲ್ಲಿ ಸಾಗುತ್ತಿದ್ದು, ಕೊಲೆಗಡುಕನನ್ನು ಬಂಧಿಸುವಲ್ಲಿಯೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿರುವುದು ತನಿಖೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೂಡಿದೆ ಎಂಬುದು ಸ್ಥಳೀಯರ ಬಲವಾದ ಶಂಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕಿದೆ. ಈ ಕೊಲೆಯ ಹಿಂದೆ ದೇಶವಿದ್ರೋಹಿ ಮನಸ್ಥಿತಿಯ ಜಾಲದ ಕೈವಾಡವಿರುವ ಅನುಮಾನವೂ ಇದೆ, ಆದ್ದರಿಂದ ರಾಷ್ಟ್ರೀಯ ತನಿಖಾ ದಳದಿಂದ (NIA) ತನಿಖೆ ನಡೆಸುವುದು ಅತ್ಯಾವಶ್ಯಕವಾಗಿದ್ದು, ಮಾನ್ಯ ರಾಜ್ಯಪಾಲರು ಮಧ್ಯ ಪ್ರವೇಶಿಸಿ NIA ತನಿಖೆ ಕೈಗೆತ್ತಿಕೊಳ್ಳುವಂತೆ ಕ್ರಮವಹಿಸುವಂತೆ ಮೃತ ಗವಿಸಿದ್ದಪ್ಪ ನಾಯಕ ಅವರ ಕುಟುಂಬಸ್ಥರೊಂದಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್, ಮಾಜಿ ಸಚಿವ ಬಿ ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಹೇಮಲತಾ ನಾಯಕ್ , ಶಾಸಕ ಅಶ್ವಥ್‌ನಾರಾಯಣ, ಎಸ್‌ಆರ್‌ ವಿಶ್ವನಾಥ್‌, ದೋಡ್ಡನಗೌಡ ಪಾಟೀಲ್‌, ಮುನಿರತ್ನ, ಬಿ.ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಮಾಜಿ ಸಚಿವ ಶಿವನಗೌಡ ನಾಯಕ್, ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ಕಾರ್ಯದರ್ಶಿ ಶರಣು ತಳ್ಳಿಕೆರಿ, ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ್ ದಡೇಸೂಗೂರು, ಬಸವರಾಜ್ ಕ್ಯಾವಟರ್ ಹಾಗೂ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Leave a Reply

error: Content is protected !!