KOPPAL NEWS :”ಕೊಪ್ಪಳ | ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ವಿವಿಧ ಸಂಘಟನೆಗಳ ಒತ್ತಾಯ”

You are currently viewing KOPPAL NEWS :”ಕೊಪ್ಪಳ | ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ವಿವಿಧ ಸಂಘಟನೆಗಳ ಒತ್ತಾಯ”

“ಕೊಪ್ಪಳ | ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ವಿವಿಧ ಸಂಘಟನೆಗಳ ಒತ್ತಾಯ”

ಪ್ರಜಾ ವೀಕ್ಷಣೆ ಡೆಸ್ಕ್‌ ನ್ಯೂಸ್‌ : 

ಕೊಪ್ಪಳ : ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ವೆಂಕಟೇಶ್ ನಾಯಕ ಅವರಿಗೆ  ಈಚೆಗೆ  ಮನವಿ  ಪತ್ರ ಸಲ್ಲಿಸಿದ್ದರು.

ಕೊಪ್ಪಳ ನಗರದಲ್ಲಿ ಅನೇಕ ಕಡೆ ರಸ್ತೆ ಸಂಚಾರ ನಿಯಮಗಳನ್ನು ಸಾರ್ವಜನಿಕರು ನಿರ್ಲಕ್ಷಿಸಲಾಗಿದ್ದನ್ನು ಗಂಭೀರವಾಗಿ ಪರಿಗಣಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವ  ರೀತಿಯಲ್ಲಿ ಸುವ್ಯವಸ್ಥಿತವಾಗಿ ಕ್ರಮಕೈಗೊಳ್ಳಬೇಕು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದರು.

ನಗರದ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಸಿ ದಿನದ 24 ಗಂಟೆ ಗಳ ಕಾಲ ಚಲನೆಯಲ್ಲಿರುವಂತೆ ನಿರ್ವಹಣೆ ಮಾಡಲು ಸಂಬಂಧ ಪಟ್ಟ ಇಲಾಖೆಯಿಂದ ಅನುಷ್ಠಾನಗೊಳಿಸಬೇಕು ಎಂದರು.

ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಗರದ ಪ್ರಮುಖ  ರಸ್ತೆಗಳ ಎರಡೂ ಬದಿಗಳಲ್ಲೂ ಪಾದಚಾರಿ ಮಾರ್ಗಗಳ ಜಾಗಗಳನ್ನು ಅತಿಕ್ರಮಿಸಿಕೊಂಡು ಗೂಡಂಗಡಿಗಳನ್ನು ನಡೆಸುತ್ತಿದ್ದು. ಇದರಿಂದ ಸಂಚರಿಸುವ ವಾಹನಗಳಿಗೆ ವಿಶೇಷವಾಗಿ ಪಾದಚಾರಿಗಳಿಗೆ ತುಂಬಾ ತೊಂದರೆಗಳು ಉಂಟಾಗುತ್ತಿವೆ ಎಂದು ಹೇಳಿದರು.

ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಎಲ್ಐಸಿ ಕಛೇರಿ ಹತ್ತಿರ ಮತ್ತು ಎಂ.ಹೆಚ್.ಪಿ.ಎಸ್. ಶಾಲೆಗೆ ಹೋಗುವ ಮಕ್ಕಳಿಗೆ ವಾಹನ ದಟ್ಟಣೆಯಿಂದ ತೊಂದರೆಯಾಗುತ್ತಿದ್ದು. ಅಪಘಾತಗಳಾಗುವ ಸಂಭವ ಹೆಚ್ಚಿರುವುದರಿಂದ ಬೆಳಿಗ್ಗೆ 9:00 ಗಂಟೆಯಿಂದ 10 ಗಂಟೆಯವರೆಗೆ.ಸಂಜೆ 4 ರಿಂದ 5 ಗಂಟೆಯವರೆಗೆ ಮಕ್ಕಳ ಹಿತ ದೃಷ್ಟಿಯಿಂದ ಸಂಚಾರಿ ಪೊಲೀಸರನ್ನು ಕರ್ತವ್ಯಕ್ಕೆ ನೇಮಿಸಬೇಕು ಎಂದರು.

ರಸ್ತೆಗಳಲ್ಲಿ ವಾಹನಗಳು ಸಂಚರಿಸುವಾಗ ಬೀಡಾಡಿ ದನ, ನಾಯಿಗಳಿಂದ ಪದೇಪದೇ ತೊಂದರೆ ಆಗುತ್ತಿದ್ದು.ತಕ್ಷಣ ಬೀಡಾಡಿ ದನಗಳು ಮತ್ತು ನಾಯಿಗಳನ್ನು ನಗರದ ಆಚೆ ಸಾಗಿಸಲು ನಗರ ಸಭೆಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ಪ್ರೇರೇಪಿಸಬೇಕು.
ನಗರದ ಬಹುತೇಕ ರಸ್ತೆಗಳಲ್ಲಿ ವಾಹನಗಳು ಸಂಚರಿಸುವಾಗ ಅಲ್ಲಲ್ಲಿ ಬಿದ್ದಿರುವ ತಗ್ಗುಗಳಿಂದ ಅಪಘಾತಗಳಾಗುತ್ತಿವೆ. ನಗರದ ಅನೇಕ ರಸ್ತೆಗಳಲ್ಲಿ ಬಿದ್ದಿರುವ ತಗ್ಗು ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ನಗರಸಭೆಯ ಅಧಿಕಾರಿಗಳಿಗೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ್ ಶೀಲವಂತರ್, ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಪಾಸ್ಟರ್ಸ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ್, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಗಾಳೆಪ್ಪ ಮುಂಗೋಲಿ, ಮುಖಂಡ ಮಖಬೂಲ್ ರಾಯಚೂರು, ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲಾ ಪಾಲಕರ ಹೋರಾಟ ಸಮಿತಿ ಅಧ್ಯಕ್ಷ ಮುನೀರ್ ಅಹ್ಮದ್ ಸಿದ್ದೀಕಿ, ಕಾರ್ಮಿಕ ಸಂಘಟನೆ ಮುಖಂಡ ಕೆ.ಬಿ.ಗೋನಾಳ, ಮೂಕಪ್ಪ ಮೇಸ್ತ್ರಿ, ಯಮನೂರಪ್ಪ ಹಾಲಳ್ಳಿ ಬಸಾಪುರ, ದುರ್ಗಪ್ಪ, ಯುವ ಮುಖಂಡ ಅಸಿಫ್ ಖಾನ್ ಹಣಗಿ ಸೇರಿದಂತೆ ಇತರರು ಇದ್ದರು.

Leave a Reply

error: Content is protected !!