You are currently viewing STATE NEWS : “ಕೊಪ್ಪಳ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅಕ್ರಮ  ಎನ್‌ಆರ್‌ಐ ಕೋಟಾವನ್ನು ಜಾರಿಗೆ : ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ತೀವ್ರ  ವಿರೋಧ!” 

STATE NEWS : “ಕೊಪ್ಪಳ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅಕ್ರಮ  ಎನ್‌ಆರ್‌ಐ ಕೋಟಾವನ್ನು ಜಾರಿಗೆ : ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ತೀವ್ರ  ವಿರೋಧ!” 

“ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅಕ್ರಮ  ಎನ್‌ಆರ್‌ಐ ಕೋಟಾವನ್ನು ಜಾರಿಗೆ : ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ತೀವ್ರ  ವಿರೋಧ!” 

 

ಪ್ರಜಾ ವೀಕ್ಷಣೆ ಡೆಸ್ಕ ನ್ಯೂಸ್‌ : 

ಕೊಪ್ಪಳ : ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ. 15% ರಷ್ಟು  ಎನ್‌ಆರ್‌ಐ (ಅನಿವಾಸಿ ಭಾರತೀಯ) ಕೋಟಾವನ್ನು ಜಾರಿಗೊಳಿಸುವ ಮತ್ತು ಬಡ ಜನರ ಸೀಟುಗಳನ್ನು 25 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡುವ ವಿದ್ಯಾರ್ಥಿ ವಿರೋಧಿ ಮತ್ತು ಶಿಕ್ಷಣ ವಿರೋಧಿ ನೀತಿಯಾಗಿದೆ ಎಂದು  ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ರಾಜ್ಯ ಘಟಕ  ತೀವ್ರವಾಗಿ  ಖಂಡಿಸಿದೆ. 

 

ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ  ನೀಡಿರುವ ಅವರು , ಸರ್ಕಾರಿ ಸಂಸ್ಥೆಗಳಲ್ಲಿ ಸೀಟುಗಳನ್ನು ಮಾರಾಟ ಮಾಡಲು ಅವಕಾಶ ನೀಡುವುದು ಪ್ರಜಾಸತ್ತಾತ್ಮಕ ಶಿಕ್ಷಣ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟದ ತಳಹದಿಯ ಮೇಲಿನ ನೇರ ಪ್ರಹಾರವಾಗಿದೆ.  ಈ ಕಾನೂನು ಬಾಹಿರ ಮತ್ತು ಅಕ್ರಮ ಎನ್‌ಆರ್‌ಐ ಕೋಟಾ, ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳನ್ನು ವಾಣಿಜ್ಯಕರಣ ಮತ್ತು ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ಕಾರ್ಯಸೂಚಿಯ ಸ್ಪಷ್ಟ ಸೂಚನೆಯಾಗಿದೆ. “ರಾಜ್ಯ ಸರ್ಕಾರವು ಸಾರ್ವಜನಿಕ ಆಸ್ತಿಯ ರಕ್ಷಕ ಮಾತ್ರ. ಖಾಸಗಿ ಮಾಲೀಕರಲ್ಲ ಎಂದು ನಾವಿಲ್ಲಿ ನೆನಪಿಸಲು ಬಯಸುತ್ತೇವೆ” ಎಂದು  ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ  (AISEC) ರಾಜ್ಯ ಅಧ್ಯಕ್ಷ ,ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು ಮತ್ತು ರಾಜ್ಯ ಕಾರ್ಯದರ್ಶಿ ಮಹೇಶ್‌ ಎಸ್.ಜಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 2020 ಯನ್ನು ತಾವು ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಹೇಳುತ್ತಲೇ ಇದೆ. ಆದರೆ ವಾಸ್ತವದಲ್ಲಿ “ಸರ್ಕಾರಿ ಶಾಲೆಗಳನ್ನು ಮುಚ್ಚುವ”, “ಧನ ಸಹಾಯ ಮಾಡಿದ ಕಾರ್ಪೊರೇಟ್ ಕಂಪನಿಗಳ ಹೆಸರನ್ನು ಶಾಲೆಗೆ ನಾಮಕರಣ ಮಾಡುವ” ಮತ್ತು “ಈ NRI ಕೋಟಾವನ್ನು ಜಾರಿಗೊಳಿಸುವ” ಕ್ರಮಗಳು ಸಾರ್ವಜನಿಕ ಶಿಕ್ಷಣವನ್ನು ಖಾಸಗೀಕರಣ ಮತ್ತು ಕಾರ್ಪೊರೇಟೀಕರಣಗೊಳಿಸುವ ಕೇಂದ್ರ ಸರ್ಕಾರದ ವಿನಾಶಕಾರಿ ಶಿಕ್ಷಣ ನೀತಿ ಒಪ್ಪುದಲ್ಲ ಎಂದು ವಿರೋಧಿಸಿದರು.

ಸರ್ಕಾರವು ನಿಜವಾಗಿಯೂ ನಮ್ಮ ಸಾರ್ವಜನಿಕ ಸಂಸ್ಥೆಗಳನ್ನು ಸುಧಾರಿಸಲು ಬದ್ಧವಾಗಿದ್ದರೆ, ಅದು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು, ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡುವ ಬೃಹತ್ ತೆರಿಗೆ ವಿನಾಯಿತಿಗಳನ್ನು ನಿಲ್ಲಿಸಬೇಕು ಮತ್ತು ಮಂತ್ರಿಗಳ ಸಂಬಳ ಹಾಗೂ ಭತ್ಯೆಗಳನ್ನು ಕಡಿತಗೊಳಿಸಬೇಕು. ಆ ಹಣವನ್ನು ಶಿಕ್ಷಣಕ್ಕೆ ವಿನಿಯೋಗಿಸಬೇಕು. “ವ್ಯಾಪಾರ ಸಂಸ್ಥೆಗಳಿಗೆ ತೆರಿಗೆ ವಿಧಿಸಿ ಮತ್ತು ಜನರನ್ನು ಉಳಿಸಿ” ಎಂಬುದು ಯಾವುದೇ ಪ್ರಜಾಪ್ರಭುತ್ವ ಸರ್ಕಾರದ ಮೂಲ ತತ್ವವಾಗಿದೆ ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರದಿಂದ ಹಿಂದೆ ಸರಿಯುವಂತೆ ಸರ್ಕಾರವನ್ನು ಒತ್ತಾಯಿಸಲು ವಿದ್ಯಾರ್ಥಿಗಳು, ವೈದ್ಯರು ಮತ್ತು ರಾಜ್ಯದ ಸಮಸ್ತ ಜನರು ಒಗ್ಗೂಡಬೇಕೆಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು (AISEC) ಪ್ರಕಟಣೆ ಮೂಲಕ  ಮನವಿ ಮಾಡಿದ್ದಾರೆ.

Leave a Reply

error: Content is protected !!