Post Views: 905
SPECIAL DAY : ಇಂದು ಕಲ್ಯಾಣ ಕರ್ನಾಟಕ ವಿಮೋಚನೆ ದಿನಾಚರಣೆಯ ಸಂಭ್ರಮ..!!
*ಹೈದರಾಬಾದ್ ಕರ್ನಾಟಕ ವಿಮೋಚನೆ; ದೇಶದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!*

ಗ್ರೇಟ್ ಬ್ರಿಟನ್ ಬ್ರಿಟಿಷರು ಭಾರತವನ್ನು ಬಿಟ್ಟು ತೊಲಗುವಾಗ ‘ಯಾವ ಕಡೆ ಹೋಗಬೇಕು’ ಎನ್ನುವ ಬಗ್ಗೆ ದೇಶಿಯ ಸಂಸ್ಥಾನಗಳಿಗೆ ಮುಕ್ತ ಅವಕಾಶ ನೀಡಿತ್ತು, ಹಾಗಾಗಿ ಅವರು ಹೈದರಾಬಾದ್ ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಭಾಗದವರ ಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿತ್ತು. ದೇಶ ಸ್ವಾತಂತ್ರ್ಯಗೊಂಡಾಗ ಸುಮಾರು 500 ದೇಶಿಯ ಸಂಸ್ಥಾನಗಳು ಇದ್ದವು. ಅದರಲ್ಲಿ ಹೈದರಾಬಾದ್ ಸಂಸ್ಥಾನವೂ ಒಂದು, 1774 ರಿಂದ 1948 ರವರೆಗೆ ಸುಮಾರು 200 ವರ್ಷಗಳ ಕಾಲ ಆಡಳಿತ ನಡೆಸಿದವರು.
ದೇಶಕ್ಕೆ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕರೆ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 1948 ರ ಸೆಪ್ಟೆಂಬರ್ 17ರಂದು ವಿಮೋಚನೆಯಾಗಿದೆ. 13 ತಿಂಗಳ ಕಾಲ ನಡೆದ ಹೈದರಾಬಾದ್ ವಿಮೋಚನಾ ಚಳವಳಿ ಫಲವಾಗಿ ನಿಜಾಮನಿಂದ ವಿಮುಕ್ತಿ ಸಿಕ್ಕಿತ್ತು.
ಅದಕ್ಕಾಗಿ ಪ್ರತಿವರ್ಷ ಈ ದಿನದಂದು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಆಚರಿಸಲಾಗುತ್ತಿದೆ. ಈಗ ಕಲ್ಯಾಣ ಕರ್ನಾಟಕ ದಿನಾಚರಣೆಯಾಗಿದೆ. ಇದರಲ್ಲಿ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳು ಇವೆ . ಇದಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮವಾಗಿದೆ.