BIG NEWS : ಸಿಎಂ ಕಾವೇರಿ ನಿವಾಸದಲ್ಲಿ ಗರಿಗೆದರಿದ ರಾಜಕೀಯ : ನವೆಂಬರ್ ಕ್ರಾಂತಿಗೆ ಮುನ್ನುಡಿ..!

ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ :
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ನವೆಂಬರ್ ತಿಂಗಳ ಕ್ರಾಂತಿ ಆಗುತ್ತೆ ಎನ್ನುವ ಮಾತು ಕೇಳಿ ಬಂದಿದ್ದು, ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೀನಾಯ ಸೋಲಿನಿಂದ ಹೊರ ಬಾರದ ಪಕ್ಷ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ ಎನ್ನಲಾಗಿದೆ.

ಇದೀಗ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ರಾಜಕೀಯ ಗರಿಗೆದರಿದ್ದು, ಸಚಿವರು, ಶಾಸಕರುಗಳು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಕಾವೇರಿ ನಿವಾಸದಲ್ಲಿ ಸಚಿವರ ಶಾಸಕರ ದಂಡೆ ಜಮಯಿಸಿದ್ದು, ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಸಿಂಧನೂರು ಶಾಸಕ ಸೇರಿದಂತೆ ಹಲವಾರು ಜನ ಶಾಸಕರು ಸಚಿವರು ಭೇಟಿ ನೀಡಿದ್ದಾರೆ.
