FLASH NEWS : ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ : ಶಾಸಕ ಬಸವರಾಜ್ ರಾಯರೆಡ್ಡಿ!

ಪ್ರಜಾ ವೀಕ್ಷಣೆ ಸುದ್ದಿ :
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದೀರ್ಘಾವಧಿವರೆಗೆ ಸಿಎಂ ಆಗುವ ಮೂಲಕ ಮಾಜಿ ಸಿಎಂ ದಿ. ದೇವರಾಜ ಅರಸು ಅವರ ದಾಖಲೆ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪತ್ರ ಬರೆದು ಶುಭಹಾರೈಸಿದ್ದಾರೆ.
‘ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಇರುತ್ತಾರೆ. 2.5 ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ’ ಎಂದು ರಾಯರೆಡ್ಡಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
