BIG NEWS : ಕೇಂದ್ರ ಬಜೆಟ್ 2026 : ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ..! : ಮಾಜಿ ಸಚಿವ ಹಾಲಪ್ಪ ಏನ್ ಹೇಳಿದ್ರು ಗೊತ್ತಾ?

PV ನ್ಯೂಸ್ :
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : 2026ರ ಕೇಂದ್ರದ ಬಜೆಟ್ ನಲ್ಲಿ ದೇಶದ ಮುಂದಿನ ಭವಿಷ್ಯದ ಬಗ್ಗೆ ಯೋಜನೆಗಳಿಲ್ಲ, ಯಾವುದೇ ಸ್ಪಷ್ಟ ಯೋಜನೆಗಳನ್ನು ದೇಶಕ್ಕೆ ನೀಡಿಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

ಕೇಂದ್ರ ಬಜೆಟ್ 2026 ಈ ಕುರಿತು ಪ್ರಜಾವೀಕ್ಷಣೆ ಡಿಜಿಟಲ್ ಮಾಧ್ಯಮಕ್ಕೆ ಪ್ರತಿಕ್ರಿಯೇ ನೀಡಿದ ಅವರು, ‘ನಿರುದ್ಯೋಗ, ಕೃಷಿ, ಶಿಕ್ಷಣ, ನೀರಾವರಿ, ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿಲ್ಲ. 3 AIMS ಕೇಂದ್ರಗಳನ್ನು ( ಏಮ್ಸ್ ಗಳನ್ನು) ಸ್ಥಾಪನೆ ಮಾಡುತ್ತಿದ್ದು, ಮೂರು ಉತ್ತರ ಭಾರತದಲ್ಲಿ ಸ್ಥಾಪನೆ ಆಗುತ್ತಿದೆ. ಕರ್ನಾಟಕದ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿರುವುದಿಲ್ಲ. ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ ಹಣ ನೀಡಿರುವುದಿಲ್ಲ , ಕರ್ನಾಟಕಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ, ಅನ್ಯಾಯ ಮಾಡಿದ್ದಾರೆ. ಹೈ ಸ್ಪೀಡ್ ರೈಲ್ ಕಾರಿಡಾರ್ ಅನ್ನು ಬೆಂಗಳೂರು – ಮುಂಬೈಗೆ ಮಾಡಬೇಕಾಗಿತ್ತು, ಇದರಿಂದ ಬೆಂಗಳೂರು ಮುಂಬೈನಲ್ಲಿ ವ್ಯಾಪಾರ ಅಭಿವೃದ್ಧಿಗೆ ಅನುಕೂಲವಾಗುತ್ತಿತ್ತು ಎಂದರು.
ಪ್ರತಿವರ್ಷ ಕೇಂದ್ರ ಸರ್ಕಾರ ಸಾಲವನ್ನು ಹೆಚ್ಚು ಪ್ರಮಾಣದಲ್ಲಿ ತೆಗೆದುಕೊಳ್ಳುತ್ತಿದ್ದೆ. ವರ್ಷ 2025 -26ರಲ್ಲಿ ರೂ. 15,68,958ಕೋಟಿ ಸಾಲ ತೆಗೆದುಕೊಂಡಿದ್ದಾರೆ. 2026-27 ವರ್ಷಕ್ಕೆ ರೂ. 17,20,000 ಕೋಟಿಗಳನ್ನು ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲದ ಪ್ರಮಾಣ ದೇಶದ ಜಿಡಿಪಿಗೆ 56% ಇದೆ. ಕೇಂದ್ರ ಸರ್ಕಾರ ತಾನೇ ಮಾಡಿದ ಕಾನೂನನ್ನು ಸತತವಾಗಿ ಉಲ್ಲಂಘಿಸುತ್ತಿದೆ. fiscal deficit ಕೊರತೆ ಪ್ರತಿ ವರ್ಷ ಜಾಸ್ತಿ ಆಗುತ್ತಿದೆ. 2025- 26ರಲ್ಲಿ ರೂ.15,58,492 ಕೋಟಿ ಗಳಾಗಿದ್ದು 2026 -27ಕ್ಕೆ ರೂ.16,95,678 ಕೋಟಿ ಗಳಾಗಿದೆ. ಇದರಿಂದ ಸ್ಪಷ್ಟವಾಗಿ ನಮಗೆ ಗೊತ್ತಾಗುತ್ತದೆ, fiscal deficit ಸಾಕಷ್ಟು ಪ್ರಮಾಣದಲ್ಲಿ (ವಿತ್ತೀಯ ಕೊರತೆ) ಹೆಚ್ಚಾಗುತ್ತಾ ಹೋಗುತ್ತಿದೆ ಎಂದು ಸವಿವರವಾಗಿ ತಿಳಿಸಿದರು.
