K’Budget 2026-27 : ಇನ್ನುಂದೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಹೆಸರು “ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ” ನಾಮಕರಣ..!!
ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು 17ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯನವರು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಗ್ರಾಮ ಪಂಚಾಯತಿಗಳ ಮರುನಾಮಕರಣ…!
ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಮಹತ್ವದ ಒಂದನ್ನು ನಿರ್ಧಾರ ಕೈಗೊಂಡಿರುವ ಸರ್ಕಾರ, ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ‘ಮಹಾತ್ಮ ಗಾಂಧಿ’ ಅವರ ಹೆಸರನ್ನು ಇಡಲು ನಿರ್ಧರಿಸಿದೆ.
ಇನ್ನು ಮುಂದೆ ಇವುಗಳನ್ನು ‘ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ’ ಎಂದು ಕರೆಯಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರದ ಕೆಲವು ಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಗಾಂಧೀಜಿಯವರ ತತ್ವಗಳನ್ನು ಪಸರಿಸಲು ಈ ಕ್ರಮ ಕೈಗೊಂಡಿದೆ ಎಂದು ಗೋಚರಿಸುತ್ತಿದೆ.