LOCAL NEWS : ನೂತನ ತಾಲೂಕು ನ್ಯಾಯಾಲಯದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕುಕನೂರು, ಮಾರ್ಚ್ 15 : ಪಟ್ಟಣದಲ್ಲಿ ನೂತನವಾಗಿ ಮಂಜೂರಾಗಿರುವ ತಾಲೂಕು ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕಾಗಿ ಗುರುತಿಸಲಾದ ಜಾಗಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸಿ.ಎಂ. ಪೂನ್ನಚ್ಚ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ :- ನ್ಯಾಯಮೂರ್ತಿ ಸಿಎಂ ಪೂನ್ನಚ್ಚ ಕುಕನೂರು ಪಟ್ಟಣದ 19 ವಾರ್ಡ್ ನ ಗುದ್ನೆಪ್ಪನ ಮಠದಲ್ಲಿ ಪ್ರಸ್ತಾವಿತ ಜಾಗದ ವಿಸ್ತೀರ್ಣ, ಸುತ್ತಮುತ್ತಲಿನ ಪರಿಸರ ಮತ್ತು ಸಾರ್ವಜನಿಕರಿಗೆ ಇರುವ ಸಂಪರ್ಕ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸಿದರು.
ಈಗಾಗಲೇ ಈ ಜಮೀನಿನ ವಿಚಾರವಾಗಿ ಕೋರ್ಟ್ ಹಂತದಲ್ಲಿ ಇರುವುದರಿಂದ ಆದಷ್ಟು ಬೇಗ ಈ ಜಾಗದ ಇತ್ಯರ್ಥಗೊಂಡ ನಂತರ ಕಟ್ಟಡ ನಿರ್ಮಾಣಕ್ಕೆ ಯಾವುದೇ ತಾಂತ್ರಿಕ ತೊಂದರೆಗಳಿಲ್ಲದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

