ಮುದಗಲ್ಲ ವರದಿ
ಮುದಗಲ್ಲ :- ಪುರಸಭೆ ವತಿಯಿಂದ ಕೆಂಪೇಗೌಡರ ಜಯಂತಿ ಆಚರಣೆ..

ಮುದಗಲ್ಲ :- ಪುರಸಭೆ ವತಿಯಿಂದ ಶನಿವಾರ ಸರಳವಾಗಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಯಿತ ಈ ಸಂದರ್ಭದಲ್ಲಿ ಕೆಂಪೇಗೌಡ ಅವರ ಭಾವಚಿತ್ರ ಕ್ಕೆ ಪುರಸಭೆ ಯ ಕಂದಾಯ ವಿಭಾಗದ ಅಧಿಕಾರಿ ಅಂತೋಣಿ ರಾಜ್ ಅವರು ಹೂಮಾಲೆ ಹಾಕಿ ಗೌರವ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸು
ವಂತದ್ದು’ ‘ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯ ದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ . ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ ಎಲ್ಲಾ ಸಮುದಾಯ ದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ವರ್ಗದವರು ಹಾಗೂ ಮುಖಂಡರು ಉಪಸ್ಥಿತರಿದ್ದರು
ವರದಿ :- ಮಂಜುನಾಥ ಕುಂಬಾರ