ಮುದಗಲ್ಲ ವರದಿ..
ಮುದಗಲ್ಲ ಪಟ್ಟಣದಲ್ಲಿ ಗಣತಿ ನಮೂನೆ ಭರ್ತಿ ಮಾಡಿ ಎಸ್ಐಆರ್ (SIR) ಅಭಿಯಾನಕ್ಕೆ ಚಾಲನೆ ಕೊಟ್ಟ ಮಾಜಿ ಶಾಸಕರಾದ ಡಿ.ಎಸ್. ಹೂಲಗೇರಿ ..
ಮುದಗಲ್ಲ :- ಲಿಂಗಸೂಗೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮುದಗಲ್ ಪಟ್ಟಣದ ಸಪ್ತಗಿರಿ ನಿವಾಸದಲ್ಲಿ ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಶ್ರೀ.ಡಿ.ಎಸ್. ಹೂಲಗೇರಿ ರವರ ಎನ್ಯುಮರೇಶನ್ ಫಾರಂ ತುಂಬಿದರು ಮುದಗಲ್ಲ ಪಟ್ಟಣದಲ್ಲಿ ಚಾಲನೆ ನೀಡಿದರು
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು ನೀವು ನಿಮ್ಮ ಹೆಸರಿನ ಜೊತೆಗೆ ಈ ಹಿಂದೆ ಮತದಾರ ಪಟ್ಟಿ ಸಮಯದಲ್ಲಿ ನೀಡಲಾಗಿದ್ದ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇಲ್ಲವಾದರೆ ಹೊಸ ಮೊಬೈಲ್ ಸಂಖ್ಯೆಯನ್ನು ಅಧಿಕಾರಿಗಳ ಮೂಲಕ ಸೇರ್ಪಡೆ ಮಾಡಿ ಕೊಳ್ಳಲು ಅವಕಾಶ ಕಲ್ಪಿಸಲಾಗು ವುದು. ಯಾವ ಸಂಖ್ಯೆ ನೀಡಿರುತ್ತಿರೋ ಅದೇ ಸಂಖ್ಯೆಗೆ ಒಟಿಪಿ ಬರಲಿದೆ” ಎಂದು ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಲಿಂಗಸೂಗೂರು ಸಹಾಯಕ ಆಯುಕ್ತರಾದ ಶ್ರೀ ಬಸಣಪ್ಪ ಕಲಶೆಟ್ಟಿ ರವರು ಹಾಗೂ
ಲಿಂಗಸೂಗೂರು ತಹಶಿಲ್ದಾರರಾದ ಶ್ರೀಮತಿ ಸತ್ಯಮ್ಮ ಮತ್ತು ಬಿಎಲ್ಒಗಳು ಉಪಸ್ಥಿತಿ ಇದ್ದರು
ವರದಿ:-ಮಂಜುನಾಥ ಕುಂಬಾರ