You are currently viewing PV NEWS : ಸಮಾಜ ಸೇವೆಗೆ ರಾಜ್ಯಮಟ್ಟದ ಗೌರವ: ಸಾಮಾಜಿಕ ಹೋರಾಟಗಾರ ಸುರೇಶ್ ಬಳೂಟಗಿ ಅವರಿಗೆ ‘ಕರ್ನಾಟಕ ಸಮಾಜ ಸೇವಾ ರತ್ನ’ ಪ್ರಶಸ್ತಿ!

PV NEWS : ಸಮಾಜ ಸೇವೆಗೆ ರಾಜ್ಯಮಟ್ಟದ ಗೌರವ: ಸಾಮಾಜಿಕ ಹೋರಾಟಗಾರ ಸುರೇಶ್ ಬಳೂಟಗಿ ಅವರಿಗೆ ‘ಕರ್ನಾಟಕ ಸಮಾಜ ಸೇವಾ ರತ್ನ’ ಪ್ರಶಸ್ತಿ!

PV NEWS : ಸಮಾಜ ಸೇವೆಗೆ ರಾಜ್ಯಮಟ್ಟದ ಗೌರವ: ಸಾಮಾಜಿಕ ಹೋರಾಟಗಾರ ಸುರೇಶ್ ಬಳೂಟಗಿ ಅವರಿಗೆ ‘ಕರ್ನಾಟಕ ಸಮಾಜ ಸೇವಾ ರತ್ನ’ ಪ್ರಶಸ್ತಿ!

PV NEWS ಕನ್ನಡ 24×7 : 

ಕುಕನೂರು, ಜು. 29 (PV NEWS ಕನ್ನಡ 24×7): ಸಮಾಜಮುಖಿ ಸೇವೆ ಹಾಗೂ ಜನಪರ ಚಟುವಟಿಕೆಗಳನ್ನು ಪರಿಗಣಿಸಿ ಸಮಾಜಸೇವಕ, ಬಂಜಾರ ಸಮಾಜದ ಸಾಮಾಜಿಕ ಹೋರಾಟಗಾರ ಸುರೇಶ್ ರಾಮಪ್ಪ ಬಳೂಟಗಿ ಅವರನ್ನು ಪ್ರತಿಷ್ಠಿತ ‘ಕರ್ನಾಟಕ ಸಮಾಜ ಸೇವಾ ರತ್ನ’ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಘಟನೆಯು ತನ್ನ ನಾಲ್ಕನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಕಾರ್ಯಕ್ರಮವು ಆಗಸ್ಟ್ 8ರಂದು ನೆಲಮಂಗಲದ ಪುಷ್ಪ ಬೈರೇಗೌಡ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಂಗೇ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ವರ್ಷ ರಾಜ್ಯ ಪ್ರಶಸ್ತಿಗಳನ್ನು ನೀಡುತ್ತಿದ್ದು, ಈ ಬಾರಿ ಸಮಾಜ ಸೇವಾ ಕ್ಷೇತ್ರದಲ್ಲಿನ ನಿರಂತರ ಕೊಡುಗೆಯನ್ನು ಪರಿಗಣಿಸಿ ಸುರೇಶ್ ರಾಮಪ್ಪ ಬಳೂಟಗಿ ಅವರನ್ನು ಗೌರವಕ್ಕೆ ಆಯ್ಕೆ ಮಾಡಿದೆ.

ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸಂಘಟನೆಯ ರಾಜ್ಯಾಧ್ಯಕ್ಷ ಬಂಗೇ ಮಲ್ಲಿಕಾರ್ಜುನ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಎಂ. ಹೊಸಗೌಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪತ್ರಕರ್ತರು, ಗಣ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಪತ್ರಿಕೋದ್ಯಮ, ಸಮಾಜಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಗಣ್ಯರನ್ನು ರಾಜ್ಯ ಪ್ರಶಸ್ತಿಗಳ ಮೂಲಕ ಸನ್ಮಾನಿಸಲಾಗುವುದು ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.

Prajavikshane

Chandru R Bhanapaur

Leave a Reply

error: Content is protected !!