You are currently viewing PV NEWS : ಬಾಡಿಗೆ ಮನೆಯಲ್ಲಿ ವಾಸಿಸುವ ಬಸವಂತಪ್ಪಗೆ ಸಚಿವ ಸ್ಥಾನ!

PV NEWS : ಬಾಡಿಗೆ ಮನೆಯಲ್ಲಿ ವಾಸಿಸುವ ಬಸವಂತಪ್ಪಗೆ ಸಚಿವ ಸ್ಥಾನ!

PV NEWS : ಬಾಡಿಗೆ ಮನೆಯಲ್ಲಿ ವಾಸಿಸುವ ಬಸವಂತಪ್ಪಗೆ ಸಚಿವ ಸ್ಥಾನ!

PV NEWS ಕನ್ನಡ 24×7 : 

ಬೆಂಗಳೂರು, ಆ. 4 (PV NEWS ಕನ್ನಡ 24×7): ರಾಜ್ಯ ಸಚಿವ ಸಂಪುಟದ ನೂತನ ವಿಸ್ತರಣೆಯಲ್ಲಿ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಕ್ಷೇತ್ರದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಸ್ವಂತ ಮನೆಯಿಲ್ಲದೆ ಬೆಂಗಳೂರಿನಲ್ಲಿ ಬಾಡಿಗೆ ನಿವಾಸದಲ್ಲೇ ವಾಸಿಸುತ್ತಿರುವ ಬಸವಂತಪ್ಪ ಅವರು ತಮ್ಮ ಸರಳ ಜೀವನಶೈಲಿ ಮತ್ತು ಸಾರ್ವಜನಿಕರೊಂದಿಗೆ ಹೊಂದಿರುವ ಆತ್ಮೀಯ ಸಂಪರ್ಕದಿಂದ ಗುರುತಿಸಿಕೊಂಡಿದ್ದಾರೆ. ಸಚಿವರಾಗಿ ಆಯ್ಕೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ದಾವಣಗೆರೆಯ ಎಸ್.ಎಸ್. ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಕಾರ್ಯಕರ್ತರು ಆಗಮಿಸಿ ಅಭಿನಂದನೆ ಸಲ್ಲಿಸಿದರು.

ಸಂಪುಟ ಪುನರ್‌ರಚನೆಯಲ್ಲಿ ಈ ಬಾರಿ ದಾವಣಗೆರೆ ಜಿಲ್ಲೆಗೆ ಬಸವಂತಪ್ಪ ಅವರಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹಿಂದೆ ಸಚಿವರಾಗಿದ್ದ ಆರ್.ಬಿ. ತಿಮ್ಮಾಪುರ ಅವರ ಸ್ಥಾನದಲ್ಲಿ ಅವರನ್ನು ಸಂಪುಟಕ್ಕೆ ಸೇರಿಸಲಾಗಿದೆ.

ದಲಿತ ಎಡಗೈ (ಮಾದಿಗ) ಸಮುದಾಯಕ್ಕೆ ಸೇರಿದ ಬಸವಂತಪ್ಪ ಅವರು ಮಾಜಿ ಸಚಿವ ಹೆಚ್. ಆಂಜನೇಯ ಅವರ ಸಂಬಂಧಿಕರಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸಾರ್ವಜನಿಕ ಜೀವನ ಆರಂಭಿಸಿದ್ದ ಅವರು, ಪಕ್ಷದ ಸಂಘಟನೆ ಹಾಗೂ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಾಜಕೀಯವಾಗಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.

ಸಚಿವ ಸ್ಥಾನ ಲಭಿಸಿರುವ ಹಿನ್ನೆಲೆಯಲ್ಲಿ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

— PV NEWS ಕನ್ನಡ 24×7

Prajavikshane

Chandru R Bhanapaur

Leave a Reply

error: Content is protected !!