You are currently viewing ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು ಹಾಗೂ ಸಲಹೆಗಾರರ ಆಗಮನ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು ಹಾಗೂ ಸಲಹೆಗಾರರ ಆಗಮನ

ಕೊಪ್ಪಳ : ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಟಿ.ಎಂ ವಿಜಯ್ ಭಾಸ್ಕರ್ ಭಾ.ಆ.ಸೆ (ನಿವೃತ್ತ) ಮತ್ತು ಕ.ಆ.ಸು.ಆ-2ರ ಸಲಹೆಗಾರರಾದ ಪ್ರಸನ್ನಕುಮಾರ್ ಭಾ.ಆ.ಸೆ (ನಿವೃತ್ತ) ಅವರು ಜೂನ್ 14, 15 ಮತ್ತು 16ರಂದು ಕೊಪ್ಪಳ ಜಿಲ್ಲೆಯ ಕಚೇರಿ, ಸಂಸ್ಥೆಗಳಿಗೆ ಭೇಟಿ ನೀಡಿ ಚರ್ಚಿಸಿ, ಆಡಳಿತ ಸುಧಾರಣೆಗಳ ಬಗ್ಗೆ ಸಲಹೆಗಳನ್ನು ಪಡೆಯಲು ಬರುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!