ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹೇರೂರು ಗ್ರಾಮ ಪಂಚಾಯತಿಯಲ್ಲಿ (ಹಳೇ ಗ್ರಾಮ ಪಂಚಾಯತಿ) ಖಾಲಿ ಇರುವ 01 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ 9000 ರೂ.ಗಳ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ಒಳಗಿನ ನಿರುದ್ಯೋಗಿ ಅಂಗವಿಕಲರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣದ ಜೊತೆಗೆ ವಿಶೇಷ ಶಿಕ್ಷಣ, ಆರ್.ಸಿ.ಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ಹೆ ಭಾಷೆ ತರಬೇತಿ, ಧೈಹಿಕ ವ್ಯಾಯಾಮ ತರಬೇತಿ ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ಅಭ್ಯರ್ಥಿಯು ಅಂಗವಿಕಲರ ಯು.ಡಿ.ಐ.ಡಿ ವಿಶೇಷ್ಠ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿದವರಾಗಿರಬೇಕು. ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು. ಮಹಿಳಾ ವಿಕಲಚೇತನರಿಗೆ ಮೊದಲ ಆಧ್ಯತೆ ನೀಡಲಾಗುವುದು.
ನಿಗದಿತ ಅರ್ಜಿ ನಮೂನೆಯನ್ನು ಆಗಸ್ಟ್ 25ರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ಗಂಗಾವತಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ (ಎಂ.ಆರ್.ಡಬ್ಲ್ಯೂ) ಪಡೆದು, ಸೆಪ್ಟೆಂಬರ್ 13ರ ಒಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ, ರವರಿಗೆ ಕಚೇರಿ ಅವಧಿಯಲ್ಲಿ ಸಲ್ಲಿಸಬೇಕು.
ಈ ಹುದ್ದೆಯು ಸಂಪೂರ್ಣವಾಗಿ ಗೌರಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕವಾಗಿದ್ದು, ನಿಗದಿಪಡಿಸಿದ ದಿನಾಂಕ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲವೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.