You are currently viewing BREAKING : ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಸಾರಥಿ ಬಿ.ವೈ. ವಿಜಯೇಂದ್ರ..!

BREAKING : ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಸಾರಥಿ ಬಿ.ವೈ. ವಿಜಯೇಂದ್ರ..!

ಬೆಂಗಳೂರು : ರಾಜ್ಯದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸೀಟು ಗೆಲ್ಲದ ಹಿನ್ನಲೆಯಲ್ಲಿ ನಳೀನು ಕುಮಾರ್ ಕಟೀಲ್‌ ಅವರನ್ನು ಬದಲಾವಣೆ ಮಾಡಲಾಗುವುದು ಎಂದು ಭಾರೀ ಸದ್ದು ಮಾಡಿತ್ತು, ಅದಕ್ಕೆ ಈಗ ಫುಲ್ ಸ್ಟಾಪ್‌ ಬಿದಿದ್ದೆ. ಈ ನಡುವೆ ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹೈಕಮಾಂಡ್‌ ಬಿ ಬೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ ಎನ್ನಲಾಗಿದೆ.

CURRENT AFFAIRS : ಪ್ರಚಲಿತ ಘಟನೆ :ತಿಳಿಯಲೇ ಬೇಕಾದ ವಿಷಯ!

ಇವರು ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ. ಬಿ.ವೈ. ವಿಜಯೇಂದ್ರ ಈ ಹಿಂದೆ ಭಾರತೀಯ ಜನತಾ ಯುವ ಮೋರ್ಚಾದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಶಿಕ್ಷಣದಿಂದ ವಕೀಲರಾಗಿದ್ದು, ಈ ಹಿಂದೆ ವಕೀಲರಾಗಿ ಸ್ವಲ್ಪ ಸಮಯ ಕೆಲಸ ಮಾಡಿದ್ದರು. ಇವರು ಶಿಕಾರಿ ಪುರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!