You are currently viewing BREAKING : ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ಇಬ್ಬರ ದಾರುಣ ಸಾವು..!!

BREAKING : ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ಇಬ್ಬರ ದಾರುಣ ಸಾವು..!!

ಕಲಬುರಗಿ : ರಾಜ್ಯದಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಇತ್ತೀಚೆಗೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುತ್ತಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಮರದ ಕೆಳಗಡೆ ನಿಂದಿದ್ದ ಇಬ್ಬರೂ ವ್ಯಕ್ತಿಗಳು ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಸಿಡಿಲು ಬಡಿದು ಇಬ್ಬರ ದಾರುಣ ಸಾವು

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಏಕನಾಥ ವಾಗಮೋಡೆ (55) ಸತೀಶ ಶೆಳಕೆ (40) ಎಂಬುವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳು ಎಂದು ಗುರುತಿಸಲಾಗಿದೆ. ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುವಾಗ ಜೋರಾಗಿ ಮಳೆ ಬಂದಿದೆ. ಈ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ನಿಂತಿದ್ದಾಗ ಸಿಡಿಲು ಬಡದು ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!