PV ನ್ಯೂಸ್ ಡೆಸ್ಕ್- ನವದೆಹಲಿ : ರಾಜ್ಯದಲ್ಲೊಂದು ಅಚ್ಚರಿಯ ಬೆಳವಣಿಗೆಯಾಗಿದ್ದು, ಕನ್ನಡಿಗರೊಬ್ಬರಿಗೆ ಉನ್ನತ ಮಟ್ಟದ ಸ್ಥಾನಮಾನ ಲಭಿಸಿದೆ. ಅದೆನೆಂದರೆ, ಮೇಘಾಲಯದ ನೂತನ ರಾಜ್ಯಪಾಲರಾಗಿ ಮಾಜಿ ಸಂಸದರು ಸಿ.ಎಚ್.ವಿಜಯಶಂಕರ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ಜುಲೈ 27 ರಂದು ತಡರಾತ್ರಿ ನಡೆದ ಸಭೆಯಲ್ಲಿ ಈ ಪ್ರಕಟಣೆ ಬಂದಿದ್ದು, ಭಾರತದಾದ್ಯಂತ ಒಂಬತ್ತು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಲಾಗಿದೆ.
ಕರ್ನಾಟಕದ ಹಿರಿಯ ರಾಜಕಾರಣಿ ವಿಜಯಶಂಕರ್ ಅವರು ತಮ್ಮ ಹೊಸ ಹುದ್ದೆಗೆ ಆಯ್ಕೆ ಆಗಿರುವುದು ಹೆಮ್ಮೆಯ ವಿಷಯವಾಗಿದೆ. ಅವರ ರಾಜಕೀಯ ವೃತ್ತಿಜೀವನವು ಅನೇಕ ದಶಕಗಳವರೆಗೆ ವ್ಯಾಪಿಸಿದ್ದು, 1994 ರಲ್ಲಿ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದ ವಿಜಯಶಂಕರ್ ಬಳಿಕ ಮೈಸೂರು ಕ್ಷೇತ್ರವನ್ನು ಪ್ರತಿನಿಧಿಸುವ ಮೂಲಕ ಲೋಕಸಭೆಯಲ್ಲಿ ಎರಡು ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು.