ಬೆಂಗಳೂರು :ಸರ್ಕಾರವು ರೈತರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ಇದೀಗ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ‘ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.