ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ ಮಹಾನ್ ಮಹರ್ಷಿಗಳಾದ ವಾಲ್ಮೀಕಿ
ಶಿರಹಟ್ಟಿ : ಪಟ್ಟಣದಲ್ಲಿ ಮೇರವಣಿಗೆಯ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಜೃಂಭಣೆಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾಕ್ಟರ್ ಚಂದ್ರು ಲಮಾಣಿ ಅವರು ವಾಲ್ಮೀಕಿಯವರು ಒಬ್ಬ ಋಷಿ ಹಾಗೂ ಸಂಸ್ಕೃತ ಕವಿ ರಾಮಾಯಣ ಮಹಾಕಾವ್ಯದ ಕರ್ತೃ. ಮೊದಲ ಮಹಾಕಾವ್ಯ ರಚಿಸಿದ ಕಾರಣ ವಾಲ್ಮೀಕಿಯವರನ್ನು ಆದಿಕವಿ ಎಂದು ಕರೆಯಲಾಗಿದೆ.
ಮಹರ್ಷಿ ವಾಲ್ಮೀಕಿ ಸಂಸ್ಕೃತದ ಮಹಾನ್ ಪ್ರತಿಪಾದಕರಾಗಿದ್ದರು ಮತ್ತು ಮಹಾಕಾವ್ಯ ರಾಮಾಯಣವನ್ನು ಬರೆದಿದ್ದಾರೆ. ಇದು ಹಿಂದೂ ಧರ್ಮದ ಶ್ರೇಷ್ಠ ಮಹಾಕಾವ್ಯಗಳಲ್ಲಿ ಒಂದಾಗಿದೆ ಮತ್ತು ಇದು ರಾಮನ ಸಂಪೂರ್ಣ ಜೀವನವನ್ನು ಬಿತ್ತರಿಸಿದೆ.ಸಂಸ್ಕೃತ ವಿದ್ವಾಂಸರು ರಾಮಾಯಣವನ್ನು ಪಠಿಸುವ ಮೂಲಕ ಅವರ ಜಯಂತಿಯನ್ನು ಆಚರಿಸುತ್ತಾರೆ. ಈಂಥಹ ಮಹಾನ್ ವ್ಯಕ್ತಿಯ ಆದರ್ಶಗಳ ಹಾಗೂ ತತ್ವಗಳ ಅಡೆಯಲ್ಲಿ ನಾವುಗಳು ಜೀವನ ಸಾಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹುಮಾಯೂನ್ ಮಾಗಡಿ, ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ನಾಗರಾಜ್ ಲಕ್ಕುಂಡಿ, ಶಿರಹಟ್ಟಿ ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ಗೋವಿಂದಪ್ಪ ಬಾಗೇವಾಡಿ, ಮಾಜಿ ಅಧ್ಯಕ್ಷರಾದ ಶಿವನಗೌಡ ಪಾಟೀಲ್,ಎಸ್ ಟಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ರಮೇಶ್ ಗುಳೇದ, ಶಿರಹಟ್ಟಿ ಪಟ್ಟಣ ಪಂಚಾಯಿತಿ ಸದಸ್ಯರಾದ ಮಂಜುನಾಥ್ ಘಂಟಿ, ಬಿಜೆಪಿ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾದ ಅಕ್ಬರ್ ಸಾಬ್ ಯಾದಗಿರಿ, ವಾಲ್ಮೀಕಿ ಸಮಾಜದ ಮುಖಂಡರಾದ ಬಸವರಾಜ ಬುರುಡಿ, ಬಸವರಾಜ್ ತುಳಿ, ಬಸವರಾಜ್ ವಡವಿ, ಶಿಕ್ಷಕರಾದ ಎಂ.ಕೆ.ಲಮಾಣಿ ಮುಂತಾದವರು ಉಪಸ್ಥಿತರಿದ್ದರು.