ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಅಧಿಕಾರ ಸ್ವೀಕಾರ
ಕೊಪ್ಪಳ : ಕೊಪ್ಪಳ ಜಿಲೆಯ ನೂತನ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಅವರು ಇಂದು (ಸೋಮವಾರ) ಅಧಿಕಾರ ಸ್ವೀಕರಿಸಿದರು.
ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರು ಪಕ್ಕದ ಜಿಲ್ಲೆಯದಂತ ರಾಯಚೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆಯ ಖಾಲಿಯಾಗಿತ್ತು, ಈ ಸಹಾಯಕ ನಿರ್ದೇಶಕರ ಹುದ್ದೆಯನ್ನು ಡಾ.ಸುರೇಶ್ ಅವರು ವಹಿಸಿಕೊಂಡರು.
ನಿರ್ಗಮಿತ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ನೂತನ ಜಿಲ್ಲಾ ವಾರ್ತಾಧಿಕಾರಿಗಳಿಗೆ ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು. ಡಾ.ಸುರೇಶ್ ಜಿ ಅವರು ಈ ಹಿಂದೆ ಬೀದರ್ ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.