BREAKING : ಸಿಟಿ ರವಿ ಬಂಧನ ಹಿನ್ನಲೆ, ನಾಳೆ ಚಿಕ್ಕಮಗಳೂರು ನಗರ ಬಂದ್..!!
ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರನ್ನು ಇಂದು ಬಂಧಿಸಲಾಗಿದೆ. ಈ ವಿಚಾರವಾಗಿ ನಾಳೆ ಚಿಕ್ಕಮಗಳೂರು ನಗರ ಬಂದ್ ಮಾಡಲು ಜಿಲ್ಲಾ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಂಡಿದೆ.
ಈ ಬಗ್ಗೆ ಇಂದು ಸಿಟಿ ರವಿ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದರು. ಸಭೆಯ ಬಳಿಕ ಚಿಕ್ಕಮಗಳೂರು ನಗರ ಬಂದ್ ಬಗ್ಗೆ ಬಿಜೆಪಿ ಮುಖಂಡರು ಖಚಿತಪಡಿಸಿದ್ದಾರೆ.